ಮೈಸೂರು: ತವರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮಾಸ್ಟರ್ ಪ್ಲಾನ್ ವರ್ಕೌಟ್ ಆಗಿದ್ದು, ರೆಸಾರ್ಟ್ ನಲ್ಲಿ ಕುಳಿತೇ ಸಿದ್ದರಾಮಯ್ಯ ಆಪರೇಷನ್ ಹಸ್ತ ನಡೆಸಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕೋಟೆ ಶಿವಣ್ಣ ಅವರನ್ನು ಕಾಂಗ್ರೆಸ್ ನತ್ತ ಸೆಳೆಯುವಲ್ಲಿ ಮುಖ್ಯಮಂತ್ರಿಗಳು ಯಶಸ್ವಿಯಾಗಿದ್ದಾರೆ. ಇಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಸಚಿವ ಕೋಟೆ ಶಿವಣ್ಣ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.