ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಾಸು ನಿಧನ ಹಿನ್ನೆಲೆ ಶಾಸಕ ಜಿ.ಟಿ.ದೇವೆಗೌಡ ವಾಸುರವರ ಅಂತಿಮ ದರ್ಶನ ಪಡೆದರು. ನಾವು ಅವರು ಬೇರೆ ಬೇರೆ ಪಕ್ಷದಲ್ಲಿದ್ದರೂ ಕೂಡ ನಮ್ಮ ಅವರ ಸಂಬಂಧ ಉತ್ತಮವಾಗಿತ್ತು. ವಾಸು ಶಿಕ್ಷಣ ಪ್ರೇಮಿ, ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ವಾಸು ನಿಧನ ನಮಗೆ ತುಂಬಾ ನೋವುಂಟು ಮಾಡಿದೆ. ವಾಸುರವರ ಸಾವಿನ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಸಂತಾಪ ಸೂಚಿಸಿದರು.