ಮೈಸೂರು: ಹೆಚ್ ಡಿ ಕೋಟೆ ತಾಲ್ಲೂಕಿನ ಮೊತ್ತ ಗ್ರಾಮದಲ್ಲಿ ಹಸು ಮೇಲೆ ಹುಲಿ ದಾಳಿ ನಡೆಸಿದ್ದು, ಬೆಲೆಬಾಳುವ ಹಸು ಕಳೆದುಕೊಂಡ ರೈತ ಕಣ್ಣೀರಿಟ್ಟಿದ್ದಾರೆ. ಗ್ರಾಮದ ಸಮೀಪ ಇತ್ತೀಚೆಗೆ ಹುಲಿ ದಾಳಿಗೆ ಮಗುವೊಂದು ಬಲಿಯಾಗಿತ್ತು. ಇದೀಗ ಗ್ರಾಮದ ಬಸವರಾಜಪ್ಪ ಎಂಬುವವರಿಗೆ ಸೇರಿದ ಹಸು ಬಲಿಯಾಗಿದ್ದು, ಅಕ್ಕಪಕ್ಕದ ಗ್ರಾಮದ ರೈತರಲ್ಲಿ ಆತಂಕ ಮನೆಮಾಡಿದೆ. ಇನ್ನು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಕೂಡಲೇ ಹುಲಿ ಸೆರೆಯಿಡಿಯುವಂತೆ ಆಗ್ರಹಿಸಿದ್ದಾರೆ.