ಬೆಂಗಳೂರು : ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಮಾತನಾಡಿದ ಅವರು, ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದೇವೆ. ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶ ಮಾಡಿ ನಿರ್ಣಯ ಮಾಡಲಾಗಿತ್ತು. ನ್ಯಾ ಸದಾಶಿವ ಆಯೋಗದ ವರದಿ ಬಗ್ಗೆ ನಿರ್ಣಯಕ್ಕೆ ತೀರ್ಮಾನ ಮಾಡಲಾಗಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ವರದಿ ತಿರಸ್ಕಾರ ಮಾಡಿದ್ದರು. ಕಾನೂನಾತ್ಮಕವಾಗಿ ಒಳ ಮೀಸಲಾತಿ ಕೊಡಬೇಕಾಗುತ್ತದೆ . ನಾವೇ ಸಂವಿಧಾನ ತಿದ್ದುಪಡಿ ತರಲು ಆಗಲ್ಲ. ಹೀಗಾಗಿ ಶಿಫಾರಸ್ಸು ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.