ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆದರಿಕೆ ಕರೆ ಬಂದಿರುವ ಬಗ್ಗೆ ಸಾಹಿತಿಗಳು ನನ್ನ ಬಳಿ ಹೇಳಿಕೊಂಡಿದ್ದರು. ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಆ ಪತ್ರದ ಹಸ್ತಾಕ್ಷರ ನೋಡಿ ಆರೋಪಿ ಬಂಧಿಸಿದ್ದಾರೆ. ಬೆದರಿಕೆ ಪತ್ರ ಯಾರು ಬರೆಸುತ್ತಿದ್ದಾರೆ ಅನ್ನೋದು ತನಿಖೆ ಆಗಲಿದೆ ಎಂದರು.