ಮಂಡ್ಯ: ಜಿಲ್ಲೆಯ ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಉಂಟಾದ ವಿವಾದದ ಬಿಸಿ ಇನ್ನೂ ತಣ್ಣಗಾಗಿಲ್ಲ. ಹಿಂದೂ ಪರ ಸಂಘಟನೆಗಳು ಇಂದು ಮಂಡ್ಯ ಬಂದ್ ಗೆ ಕರೆ ನೀಡಿವೆ ಮತ್ತು ಅದರ ಪರಿಣಾಮವಾಗಿ ನಗರದ ಬಹುತೇಕ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ. ಅಹಿತಕರ ಘಟನೆಗಳಿಗೆ ನಡೆಯದಂತೆ ನೋಡಿಕೊಳ್ಳಲು ನಗರದಾದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.