ಮೈಸೂರು : ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಕಣ ರಂಗೇರಿದ್ದು, ಚುನಾವಣೆಯಲ್ಲಿ ಅಕ್ರಮ ತಡೆಗಟ್ಟಲು ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಇಂದು ಗ್ರಾಮಾಂತರ ಬಸ್ ನಿಲ್ದಾಣದಲ್ಲಿನ ಚೆಕ್ ಪೋಸ್ಟ್ ಗೆ ನಗರ ಪಾಲಿಕೆ ಉಪ ಆಯುಕ್ತೆ ಕೆ.ಜೆ. ಸಿಂಧೂ ಭೇಟಿ ನೀಡಿ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.