ಮೈಸೂರು : ಮೈಸೂರು ಕೊಡಗು ಬಿಜೆಪಿ ಟಿಕೆಟ್ ಯದುವೀರ್ ಒಡೆಯರ್ ಅವರಿಗೆ ನೀಡಲಾಗುತ್ತಿದೆ ಎನ್ನುವ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಹೀಗಾಗಿ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ರಾಜಕೀಯಕ್ಕೆ ಬರುವುದನ್ನ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಅಭಿಯಾನ ನಡೆಸಲಾಗಿದೆ. ಯದುರಾಜರೇ ನಿಮಗೆ ನಿಮ್ಮದೇ ಘನತೆ ಇದೆ. ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ ಎಂದು ಯದುವೀರ್ ರಾಜಕೀಯ ಪ್ರವೇಶಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ.