ಹಾಸನ: ರಾಜ್ಯಸಭಾ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಕಾಂಗ್ರೆಸ್ ವಿರುದ್ಧ ನೈತಿಕ ಜಯ ಸಾಧಿಸಿದ್ದೇವೆ ಎಂದು ಜೆಡಿಎಸ್ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಪಕ್ಷೇತರ ಶಾಸಕರು ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ ಚಲಾಯಿಸಬಹುದೆನ್ನುವ ನಿರೀಕ್ಷೆಯಿಂದ ಎನ್ ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕಿಳಿಸಲಾಗಿತ್ತು, ಎಣಿಕೆ ತಪ್ಪಾಗಿದ್ದರಿಂದ ರೆಡ್ಡಿಗೆ ಸೋಲಾಯಿತು. ಆದರೆ, ಜೆಡಿಎಸ್ ಪಕ್ಷ ಕಾಂಗ್ರೆಸ್ ಸರಕಾರದ ವಿರುದ್ಧ ನೈತಿಕ ಗೆಲುವು ಸಾಧಿಸಿರುವ ತೃಪ್ತಿ ತಮಗಿದೆ. ತಮ್ಮ ಪಕ್ಷ ಒಡೆದ ಮನೆಯಾಗಿದೆ ಎಂದು ಅವರು ಭಾವಿಸಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ 4-5 ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಯ ಪರ ಮತ ಚಲಾಯಿಸುತ್ತಾರೆ ಅಂತ ಆವರು ಅಂದುಕೊಂಡಿದ್ದರು, ಅದರೆ ಪಕ್ಷದ ಎಲ್ಲ 19 ಶಾಸಕರು ತಮ್ಮ ಅಭ್ಯರ್ಥಿಗೆ ವೋಟು ಮಾಡಿ ಪಕ್ಷದಲ್ಲಿರುವ ಒಗ್ಗಟ್ಟು ಮತ್ತು ಶಿಸ್ತನ್ನು ಪ್ರದರ್ಶಿಸಿದ್ದಾರೆ ಎಂದು ಪ್ರಜ್ವಲ್ ಹೇಳಿದರು.