ಮೈಸೂರು : ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ರನ್ನು ಖಂಡಿತವಾಗಿಯೂ ಜೈಲಿಗೆ ಕಳುಹಿಸುತ್ತೇನೆ ಎಂದು ಪ್ರತಾಪ್ ಸಿಂಹ ಚಾಲೆಂಜ್ ಮಾಡಿದ್ದಾರೆ.
ಮೈಸೂರಿನಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸಾಮಾಜಿಕ ಸಮ್ಮೇಳನದಲ್ಲಿ ಶಪಥ ಮಾಡಿದ ಪ್ರತಾಪ್ ಸಿಂಹ, ಎಂ ಲಕ್ಷ್ಮಣ್ ವಿರುದ್ಧ ಎರಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದೇನೆ. ನನ್ನ ಮೇಲೆ ಮಾಡಿದ್ದ ಸುಳ್ಳು ಆರೋಪ ಸಂಬಂಧ ಮೊಕದ್ದಮೆ ದಾಖಲಿಸಿದ್ದೇನೆ. ಲಕ್ಷ್ಮಣ್ ರನ್ನು ಖಂಡಿತವಾಗಿಯೂ ಜೈಲಿಗೆ ಕಳುಹಿಸುತ್ತೇನೆ. 47 ವರ್ಷಗಳ ಬಳಿಕ ಒಕ್ಕಲಿಗರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ ಎನ್ನುತ್ತಿದ್ದಾರೆ. ಎಂ ಲಕ್ಷ್ಮಣ್ ಹೋದಲ್ಲಿ ಬಂದಲ್ಲಿ ಒಕ್ಕಲಿಗ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಅವರಿಗೆ ಒಕ್ಕಲಿಗ ಎಂದು ಸರ್ಟಿಫಿಕೆಟ್ ಕೊಟ್ಟವರು ಯಾರು ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.