ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಂಸ ಸೇವಿಸಿ ಸುತ್ತೂರು ಮಠಕ್ಕೆ ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇನ್ನು ಈ ಬಗ್ಗೆ ಮಾಧ್ಯಮಗಳು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದು, ಇಂತಹ ಸಿಲ್ಲಿ ಪ್ರಶ್ನೆಗಳನ್ನು ಕೇಳಬೇಡಿ. ಊಟ, ತಿಂಡಿ ತಿನ್ನೋದು, ಬಟ್ಟೆ ಹಾಕುವುದರ ಬಗ್ಗೆ ಮಾತಾಡಕ್ಕಾಗುತ್ತಾ? ಬಡವರ ಸಮಸ್ಯೆ ಹಾಗೂ ನಿರುದ್ಯೋಗ ಇದೆಲ್ಲ ಮಾತಾಡೋಣ. ಅದನ್ನು ಬಿಟ್ಟು ಮಾಂಸ ಸೇವಿಸಿ ಮಠಕ್ಕೆ ಭೇಟಿ ಹೀಗೆಲ್ಲಾ ಕೇಳಬೇಡಿ ಎಂದು ಗರಂ ಆದರು.