ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಆತಂಕ ಇದ್ದರೆ ತಾನೇ ಟೆನ್ಷನ್ . ನನಗೆ ಯಾವ ಆತಂಕವೂ ಇಲ್ಲ. ಹೀಗಾಗಿ ನಾನು ಕೂಲ್ ಆಗಿ ಇದ್ದೇನೆ. ಅದು ಕೂಡ ನನ್ನ ಆರೋಗ್ಯದ ಗುಟ್ಟು. ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳಿದರು. ಆದರೆ ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವಯಸ್ಸು ಆಗಿ ಬಿಡುತ್ತದೆ. 83 ವಯಸ್ಸು ಆದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತೆ. ಇದಕ್ಕೆ ಚುನಾವಣಾ ರಾಜಕಾರಣ ಸಾಕು ಎಂದಿಕೊಂಡಿದ್ದೇನೆ ಎಂದು ತಿಳಿಸಿದರು.
ಇದೇ ವೇಳೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ವಿಚಾರಕ್ಕೆ ಮಾತನಾಡಿ ಬೆಂಗಳೂರಿನಲ್ಲಿ ಯಾವ ಸಮಸ್ಯೆ ಇಲ್ಲ. ಸುಮ್ಮನೆ ಕೆಲವೊಮ್ಮೆ ಊಹಾ ಪೋಹದ ವರದಿ ಬರೆಯುತ್ತಾರೆ. ಕೆಲ ಒಂದೆರಡು ಕಡೆ ಸಮಸ್ಯೆ ಇದ್ದರು ಅದನ್ನು ಬಗೆ ಹರಿಸುವಂತೆ ಹೇಳಿದ್ದೇನೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಯಾವ ಹಣದ ಸಮಸ್ಯೆ ಇಲ್ಲ. ಚುನಾವಣೆ ಇರುವುದರಿಂದ ಸಭೆ ಮಾಡಲು ಆಗುತ್ತಿಲ್ಲ ಅಷ್ಟೆ. ಯಾವ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.