ಮೈಸೂರು : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗೊಂದಲದ ಗೂಡಾಗಿದ್ದು, ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈ ತಪ್ಪಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಸ್ವತಃ ಮಾತನಾಡಿದ ಪ್ರತಾಪ್ ಸಿಂಹ, ಕಾಯಲು ಬೆಟ್ಟದ ಮೇಲೆ ತಾಯಿ ಇದ್ದಾಳೆ. ಚಾಮುಂಡಿ ನನ್ನ ಕೈ ಬಿಡಲ್ಲ ಎಂದರು. ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ಗೆ ಬೆಂಬಲಿಸುವ ವಿಚಾರವಾಗಿ ಮಾತನಾಡಿದ ಅವರು, ನಾನು ಗೆದ್ದರೆ ಸಿದ್ದರಾಮಯ್ಯ ಅವರು ಸೀಟು ಅಲುಗಾಡುತ್ತದೆ. ಪ್ರತಾಪ್ ಸಿಂಹ ಸೋಲಿಸಲು ಆಗಲ್ಲ ಎಂದು ಕಾಂಗ್ರೆಸ್ ಗೆ ಗೊತ್ತಿದೆ. ಹೀಗಿರುವಾಗ ಕಾಂಗ್ರೆಸ್ಗೆ ನಮ್ಮ ಪಕ್ಷದವರು ಹೇಗೆ ಸಪೋರ್ಟ್ ಮಾಡುತ್ತಾರೆ ಎಂದು ಪ್ರಶ್ನಿಸಿದರು. ಅಲ್ಲದೆ ಸಂಸದರ ಟಿಕೆಟ್ ನಿರ್ಧಾರ ಮಾಡುವುದು ಜನರು. ರಾಜ್ಯದಲ್ಲಿ 28 ಮಂದಿ ಸಂಸದರು ಇದ್ದಾರೆ. ಅವರ ಕೆಲಸಗಳನ್ನು ನೋಡಿ ಟಿಕೆಟ್ ನೀಡುತ್ತಾರೆ. ಜನ ಖುಷಿಯಾಗಿದ್ದಾರೆ ಅಂದರೆ ಮೇಲಿನವರು ಅದೇ ನಿರ್ಧಾರ ಮಾಡುತ್ತಾರೆ. ಮೈಸೂರಿನಲ್ಲಿ ನಾನು ಇಂತಾ ಕೆಲಸ ಮಾಡಿಲ್ಲ ಎಂದು ಹೇಳಲಿ. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಆದರೆ, ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ ಇದ್ದಾಳೆ ಎಂದರು.