ಮಂಡ್ಯ : ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ಸಿಗುತ್ತದೆ ಎಂದು ಸಂಸದೆ ಸುಮಲತಾ ಅಂಬರೀಶ್ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ. ಶೀಘ್ರದಲ್ಲೆ ನಾನು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತೇನೆ ಎಂದು ತಿಳಿಸಿದರು.