ಮಂಡ್ಯ : ಕೆರೆಗೋಡು ಹನುಮ ಧ್ವಜ ತೆರವು ವಿವಾದ ಸಂಬಂಧ ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದ ಮಂಡ್ಯ ಬಂದ್ ಹಿಂಪಡೆಯಲಾಗಿದೆ. ನಿನ್ನೆ ಬಿಜೆಪಿ ಮನೆ ಮನೆಗೆ ಹನುಮ ಧ್ವಜ ನೀಡಿ ಅಭಿಯಾನ ಮಾಡಿದೆ. ಸದ್ಯ ಈಗ ಮತ್ತೊಂದು ಬೆಳವಣಿಗೆಯಾಗಿದ್ದು ಮಂಡ್ಯ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.