ಮಂಡ್ಯ : ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಖಂಡಿಸಿ BJP, JDS & ಹಿಂದೂ ಸಂಘಟನೆ ಕಾರ್ಯಕರ್ತರು ಮಂಡ್ಯ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಶಾಸಕ ರವಿಕುಮಾರ್ ಗಣಿಗ ಫ್ಲೆಕ್ಸ್ ಹರಿದು, ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ರಾಜಕಾರಣಿಗಳ ಪರ-ವಿರೋಧ ಟೀಕೆಗಳು ಈ ಗಲಾಟೆಗೆ ಮತ್ತಷ್ಟು ತುಪ್ಪ ಸುರಿಯುವ ಕೆಲಸ ಆಗುತ್ತಿದೆ. ಫೆಬ್ರವರಿ 9ಕ್ಕೆ ಮಂಡ್ಯ ಬಂದ್ಗೆ ಕರೆ ಕೊಡಲಾಗಿದೆ. ಇದರ ನಡುವೆ ಈಗ ಈ ಗಲಾಟೆಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪಕ್ಷಭೇದ ಮರೆತು ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಬೆಂಬಲಿತ ಕೆರಗೋಡು ಗ್ರಾ.ಪಂ ಸದಸ್ಯರು ಹನುಮ ಸ್ತಂಭಕ್ಕೆ ಬೆಂಬಲ ಸೂಚಿಸಿದ್ದರು ಎಂಬುವುದು ತಿಳಿದು ಬಂದಿದೆ.