ನವದೆಹಲಿ : ತುಮಕೂರು ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಬೇಕೇ ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ತುಮಕೂರು ಹಾಲಿ ಸಂಸದ ಜಿ.ಎಸ್.ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕೆಂದು ಅವರ ಭಾವನೆಯಾಗಿದೆ. ಸಾಧ್ಯವಾದರೆ ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುತ್ತೆನೆ ಎಂದರು. ಖಾಸಗಿ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಭೇಟಿಗೂ ಯತ್ನಿಸುತ್ತೇನೆ. ಅವಕಾಶ ಸಿಗದಿದ್ದರೂ ಪಕ್ಷದ ಕೆಲಸ ಮಾಡುತ್ತೇನೆ ಎಂದರು. ಮಾಜಿ ಸಚಿವ ಕೆ.ಸುಧಾಕರ್ ಸ್ಪರ್ಧೆ ಮಾಡುವ ಬಗ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಸೋಮಣ್ಣ, ನನಗೆ ಆ ಬಗ್ಗೆ ಮಾಹಿತಿ ಇಲ್ಲ. ಸುಧಾಕರ್ ಏನು ಹೇಳಿದ್ದಾರೆ ಅಂತ ನನಗೆ ಗೊತ್ತಿಲ್ಲ. ಗೊತ್ತಿಲ್ಲದೆ ಮಾತಾಡುವುದು ಸರಿಯಲ್ಲ ಎಂದರು.