ಬೆಂಗಳೂರು : ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಹಾಗೂ ಎನ್.ಐ.ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಕೆಫೆ ಮಾಲೀಕರು ಶಿವರಾತ್ರಿ ದಿನದಂದು ಕೆಫೆ ಪುನರಾರಂಭಿಸಲು ಮುಂದಾಗಿದ್ದಾರೆ. ಆದರೆ, ತನಿಖೆ ಹಂತದಲ್ಲಿ ಇರುವುದರಿಂದ ಮಾರ್ಚ್ 8 ರಂದು ಕೆಫೆ ರೀ ಓಪನ್ ಮಾಡಲು ಅನುಮತಿ ಸಿಗುವುದು ಬಹುತೇಕ ಅನುಮಾನವಾಗಿದೆ. ಸ್ಫೋಟ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೊಂದೆಡೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎನ್ಐಎ ಪ್ರಕರಣ ದಾಖಲಿಸಿಕೊಂಡು ಅಖಾಡಕ್ಕಿಳಿದಿದೆ. ಈ ನಡುವೆ ಕೆಫೆ ಪುನರಾರಂಭಕ್ಕೆ ಮಾಲೀಕರು ಮುಂದಾಗಿದ್ದರೂ ಸ್ಥಳೀಯ ಪೊಲೀಸರಿಂದ ಎನ್ಒಸಿ ಪಡೆಯುವುದು ಅವಶ್ಯಕವಾಗಿದೆ. ಆದರೆ, ತನಿಖಾ ಹಂತವಾಗಿ ಕೆಫೆ ತೆರೆಯಲು ಪೊಲೀಸರು ಅನುಮತಿ ನೀಡಿಲ್ಲ.