ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಮಾರುತಿದ್ದ ಅಂಗಡಿಗಳ ಮೇಲೆ ಶಿವಮೊಗ್ಗ ನಗರದ ಗಾಂಧಿ ಬಜಾರ್ ಪೊಲೀಸರು ದಾಳಿ ನಡೆಸಿದ್ದಾರೆ.
ಶಿವಮೊಗ್ಗ ತಹಶಿಲ್ದಾರ್ ನಾಗರಾಜ್ ನೇತೃತ್ವದಲ್ಲಿ ದೊಡ್ಡಪೇಟೆ ಪೊಲೀಸರು ನಡೆಸಿರುವ ದಾಳಿ. ಗಾಂಧಿ ಬಜಾರ್ ನಲ್ಲಿ ರಮೇಶ್ ಎನ್ನುವವರು ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ವೇಳೆ ನಡೆದಿರುವ ದಾಳಿ. ಸುಮಾರು 50 ಸಾವಿರ ರೂಪಾಯಿ ಮೌಲ್ಯದ ಪಟಾಕಿ ವಶಕ್ಕೆ ಪಡೆದಿರುವ ಪೊಲೀಸರು. ಮುಂಚಿತವಾಗಿಯೇ ಯಾವುದೇ ಅಹಿತಕರ ಘಟನೆಗಳು ತಡೆಯಲು ಜಿಲ್ಲಾಡಳಿತ ಫ್ರೀಡಂ ಪಾರ್ಕ್ ನಲ್ಲಿ ಪಟಾಕಿ ಮಾರಾಟ ಮಾಡಲು ಅವಕಾಶ ಕಲ್ಪಿಸಿತ್ತು. ಜಿಲ್ಲಾಡಳಿತದ ಆದೇಶವಿದ್ದರು ಜನ ನಿಬಿಡ ಪ್ರದೇಶದಲ್ಲಿ ಅಕ್ರಮ ಪಟಾಕಿ ಮಾರಾಟ ಮಾಡುತ್ತಿದ್ದ ರಮೇಶ್. ಈ ಬಗ್ಗೆ ಎಂಬ ದೂರು ಬಂದ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು.
ಈ ಮೊದಲು ಹಸಿರು ಪಟಾಕಿಗಳನ್ನ ಮಾರಾಟ ಮಾಡುವ ಉದ್ದೇಶದಿಙದ ದಾಳಿ ನಡೆಸಿದ್ದ ಪೊಲೀಸರು ಬಳಿಕ ನಿನ್ನೆ ಅಕ್ರಮ ಪಟಾಕಿ ಮಾರಾಟ ಮಳಿಗೆ ಮೇಲೆ ದಾಳಿ ಮಾಡಿದ್ದಾರೆ.