ಗುಂಡ್ಲುಪೇಟೆ : ಗೌರಿ ಗಣೇಶ ಹಬ್ಬದ ಗಣೇಶ ಪ್ರತಿಷ್ಠಾಪನೆ ಹಿನ್ನೆಲೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರ ಜತೆ ಇದೆ ಎಂಬ ಸಂದೇಶದೊಂದಿಗೆ ಪೊಲೀಸ್ ಸಿಬ್ಬಂದಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕವಿತಾ ಹಾಗೂ ಡಿವೈಎಸ್ಪಿ ಲಕ್ಷ್ಮಯ್ಯ ಅವರ ಮಾರ್ಗದರ್ಶನದ ಮೇರೆಗೆ ಪಟ್ಟಣ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕರಾದ ಪರಶಿವಮೂರ್ತಿ ಅವರ ನೇತೃತ್ವದಲ್ಲಿ ನ ಡೆಯಿತು.
ಪಟ್ಟಣದ ಪ್ರಮುಖ ಬೀದಿಗಳಾದ ಮಡಹಳ್ಳಿ ವೃತ್ತ, ನಾಯಕರ ಬೀದಿ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಆರ್.ಟಿ.ಓ ಸರ್ಕಲ್, ಕೆ.ಆರ್.ಸಿ.ರಸ್ತೆ , ಎಂಡಿಸಿಸಿ ಬ್ಯಾಂಕ್ ಸರ್ಕಲ್ ಸೇರಿದಂತೆ ಕೊಡ್ಡಹಳ್ಳಿ ರಸ್ತೆ, ಐಬಿ ಸರ್ಕಲ್ ಬಳಿ ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗ ಹಾಗೂ ಹೋಂ ಗಾರ್ಡ್ ಗಳು ಜತೆಗೂಡಿ ಪಥ ಸಂಚಲ ನಡೆಸಲಾಯಿತು. ಸಬ್ ಇನ್ಸ್ ಪೆಕ್ಟರ್ ಸಾಹೇಬಗೌಡ, ಚಂದ್ರಪ್ಪ, ಜಯರಾಮ್ ಇದ್ದರು.