ಪ್ರತಿನಿಧಿ ವರದಿ ಚಾಮರಾಜನಗರ
ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ತಾಲೂಕಿನ ಶಿವಪುರದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ನಂತರ ಸಮೀಪದ ಯಡಪುರ, ಉತ್ತ್ತವಳ್ಳಿ, ಮಲ್ಲಯ್ಯನಪುರ, ಕೆ.ಕೆ.ಹುಂಡಿ ಹಾಗೂ ಹೆಗ್ಗೋಠಾರ ಗ್ರಾಮ ಪಂಚಾಯಿತಿ ಗ್ರಾಮಗಳಲ್ಲಿ ಮತಯಾಚನೆ ನಡೆಸಿ ಮಾತನಾಡಿದರು.
ಸಿದ್ದರಾಮಯ್ಯ ಅವರು 2 ಬಾರಿ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ನೀಡಿದ್ದಾರೆ. ಸಚಿವರಾಗಿದ್ದ ಎಚ್.ಎಸ್.ಮಹದೇವಪ್ರಸಾದ್, ಸಂಸದರಾಗಿದ್ದ ಆರ್. ಧ್ರುವನಾರಾಯಣ್ ಹಾಗೂ ನಾನು ಸೇರಿ ಜಿಲ್ಲೆಗೆ ಅಭಿವೃದ್ದಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ ಎಂದರು.
ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 167 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದ್ದಾರೆ. ಈ ಬಾರಿ ಐದು ಗ್ಯಾರಂಟಿಗಳನ್ನು ನೀಡಿ ಬಡವರ ಪರ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾ ಯಿ ಅವರು ಎರಡು ಬಾರಿ ಚಾಮರಾಜನಗರಕ್ಕೆ ಬಂದರೂ ಒಂದು ರೂ.ಅನುದಾನ ನೀಡಲಿಲ್ಲ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಚಾಮರಾಜನಗರ ಶಾಪಗ್ರಸ್ಥ ಜಿಲ್ಲೆ ಎಂದು ಹೇಳಿ ಜಿಲ್ಲಾಕೇಂದ್ರಕ್ಕೆ ಬರುವ ಮನಸ್ಸು ಮಾಡಲಿಲ್ಲ ಎಂದರು.
ಬಿಜೆಪಿ ಪಕ್ಷದಿಂದ ಜಿಲ್ಲೆಗೆ ಯಾವ ಕೊಡುಗೆ ದೊರೆತಿದೆ ಎಂಬುದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 5 ಗ್ಯಾರಂಟಿ ಗಳನ್ನು ಈಡೇರಿಸಿದೆ. ಹಾಗಾಗಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು,
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕ ಮಹದೇವ್, ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್, ಒಬಿಸಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ.ಮಹದೇವಶೆಟ್ಟಿ, ಎ.ಪಿ.ಎಂ.ಸಿ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಅಧ್ಯಕ್ಷ ನಾಗೇಂದ್ರ, ಗ್ರಾ.ಪಂ. ಮಾಜಿ ಅಧ್ಯಕ್ಷ ಸ್ವಾಮಿ, ಶಿವಕುಮಾರ್, ಪ್ರಮೋದ್, ಶಾಂತಲಾ, ಇತರರಿದ್ದರು.
5.ಸಿಎಚ್ಎನ್.1:ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ತಾಲೂಕಿನ ಶಿವಪುರದಲ್ಲಿ ಮರಯಾಚನೆ ಮಾಡಿದರು.