ಮೈಸೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂದಲ್ಲ , ಎರಡು ಬಾರಿ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಆದರೆ ಈವರಗೆ ಯಾವುದೇ ಉತ್ತರ ಬಂದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಕಚೇರಿಗೆ ಪತ್ರ ಬರೆದರೆ ಉತ್ತರ ಬಂದೇ ಬರುತ್ತದೆ ಎನ್ನುವ ಅಭಿಪ್ರಾಯ ನಿಮ್ಮ ತಪ್ಪು ತಿಳುವಳಿಕೆ. ಹಾಗಂತ ಪ್ರಧಾನಿ ಮೋದಿ ಸೆಲೆಕ್ಟಿವ್ ಆಗಿದ್ದಾರೆ ಅಂತ ನಾನು ಹೇಳಲ್ಲ. ಒಬ್ಬ ಸಿಎಂ ಆಡಳಿತ ಪಕ್ಷ ಪ್ರಧಾನಿಗೆ ಪತ್ರ ಬರೆದರೆ ಉತ್ತರ ಕೊಡಬೇಕಿತ್ತು. ಆದರೆ ಅವರು ಉತ್ತರ ಕೊಡುವ ಕೆಲಸ ಮಾಡಿಲ್ಲ. ಯಾಕೆ ಕೊಟ್ಟಿಲ್ಲ ಎಂಬುದನ್ನು ನೀವು ಅವರನ್ನೇ ಕೇಳಿ. ಬಿಜೆಪಿಯ ಪ್ರಹ್ಲಾದ್ ಜೋಷಿಯನ್ನು ಕೇಳಿ ಎಂದು ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.