ಮೈಸೂರು ಜಿಲ್ಲಾ ಪಂಚಾಯಿತಿಯ ಡಿ.ದೇವರಾಜು ಅರಸು ಸಭಾಂಗಣದಲ್ಲಿ ರೈತ ದಸರಾ ಉಪಸಮಿತಿಯ ಉಪವಿಶೇಷಾಧಿಕಾರಿ ಹಾಗೂ ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು ರವರ ಅಧ್ಯಕ್ಷತೆಯಲ್ಲಿ ರೈತ ದಸರಾ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರು, ರೇಷ್ಮೇ ಇಲಾಖೆ ಉಪನಿರ್ದೇಶಕರು, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.