ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಶುರುವಾಗಿದೆ ಕ್ಷಣಗಣನೆ ಆರಂಭವಾಗಿದೆ. ದಸರಾ ಜಂಬೂ ಸವಾರಿಯ (Dasara Jamboo Savari) ವೀಕ್ಷಣೆಗಾಗಿ ದೇಶ, ವಿದೇಶಿ ಪ್ರವಾಸಿಗರು ಅರಮನೆ ನಗರಿಗೆ ಆಗಮಿಸುತ್ತಿದ್ದಾರೆ. ಅಕ್ಟೋಬರ್ 24ರ ಮಂಗಳವಾರದಂದು ನಡೆಯಲಿರುವ ಜಂಬೂ ಸವಾರಿಗೆ ಬೇಕಾದ ಸಿದ್ಧತೆಗಳು ಕೂಡಾ ಭರದಿಂದ ಸಾಗಿದೆ.ಜಂಬೂ ಸವಾರಿ ಸಾಗುವ ರಸ್ತೆಯ ಎರಡು ಬದಿಗಳಲ್ಲಿ ಮರದ ಕಟ್ಟಿಗೆಗಳಿಂದ ತಾತ್ಕಾಲಿಕ ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ಜೊತೆಗೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಶಾಮಿಯಾನ ಅಳವಡಿಸಲಾಗುತ್ತಿದೆ. ಇಡೀ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಚಿನ್ನದ ಅಂಬಾರಿ ಹೊತ್ತು ಸಾಗಲಿದ್ದಾನೆ.
ಈ ಸಂದರ್ಭದಲ್ಲಿ ನೂರಾರು ಗಣ್ಯರು, ಲಕ್ಷಾಂತರ ಪ್ರವಾಸಿಗರು ಈ ದೃಶ್ಯವನ್ನು ಕಣ್ತುಂಬಿಕೊಳ್ಳಲಿದ್ದಾರೆ. ವಿವಿಧ ಬಗೆಯ ವೇಷಧಾರಿಗಳು, ಸ್ತಬ್ಧಚಿತ್ರಗಳು, ಕಲಾ ಪ್ರಕಾರಗಳು, ಜಾನಪದ ಹಾಗೂ ಸಾಂಪ್ರದಾಯಿಕ ಕಲೆಗಳು ದಸರಾ ಜಂಬೂ ಸವಾರಿಗೆ ಭಾರೀ ಮೆರುಗು ನೀಡಲಿದೆ.