ಹೊಸೂರು: ಸಾಲಿಗ್ರಾಮ ತಾಲೂಕಿನ ಜವರೇಗೌಡನ ಕೊಪ್ಪಲು ಗ್ರಾಮದ ಕ್ರಾಸ್ ಬಳಿ ಬೈಕ್ ಮತ್ತು ಕ್ಯಾಂಟರ್ ನಡುವಿನ ಅಪಘಾತದಲ್ಲಿ ಅರ್ಚಕ ಮೃತಪಟ್ಟಿದ್ದಾರೆ.
ಮಾಯಿಗೌಡನಹಳ್ಳಿ ಗ್ರಾಮದ ಬಸವೇಶ್ವರ ದೇವಾಲಯದ ಅರ್ಚಕ ರಾಜು( 55 ) ಮೃತಪಟ್ಟಿವರಾಗಿದ್ದಾರೆ. ಪತ್ನಿ ಮತ್ತು ಮೂವರು ಪುತ್ರಿಯರು ಇದ್ದಾರೆ. ರಾಜು ಅವರು ಹೊಸೂರಿನಿಂದ ಮಾಯಿಗೌಡನಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೆ.ಆರ್.ನಗರದ ಕಡೆ ತೆರಳುತ್ತಿದ್ದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಸ್ಥಳಕ್ಕೆ ಸಾಲಿಗ್ರಾಮ ಠಾಣೆಯ ಪಿ.ಎಸ್.ಐ.ರಂಗಸ್ವಾಮಿ, ಚುಂಚನಕಟ್ಟೆ ಉಪ ಠಾಣೆ ಮುಖ್ಯ ಪೇದೆ ದೊರೆಸ್ವಾಮಿ, ಎಸ್.ಬಿ.ಸಿಬ್ಬಂದಿ ಚೇತನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾಲಿಗ್ರಾಮ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.