ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಘೋಷಣೆಯನ್ನ ಕೂಗಿ ಪ್ರತಿಭಟನೆಯನ್ನ ನಡೆಸಿದರು.
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮುಡಾ ಪ್ರಕರಣ ದಿನದಿಂದ ದಿನಕ್ಕೆ ಹೊಸ ರೂಪ ತಾಳುತ್ತಿದೆ. ಒಬ್ಬರನೊಬ್ಬರು ಬೆರಳು ಮಾಡುವುದರಲ್ಲಿ ನಿರತರಾಗಿರುವ ರಾಜ್ಯ ನಾಯಕರುಗಳು, ಸೇರಿಗೆ ಸವಾ ಸೇರು ಎಂಬತೆ ಸಿಎಂ ತವರಲ್ಲಿ ಸಮಾವೇಶಗಳನ್ನ ನಡೆಸಿದ್ದರು. ಅಲ್ಲದೆ ವಿಪಕ್ಷ ನಾಯಕರುಗಳು ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸುತ್ತಿದ್ದರು. ಆದರೀಗ ಸಾರ್ವಜನಿಕ ವಲಯದಲ್ಲೂ ಕೂಡ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿವೆ.