ಚಾಮರಾಜನಗರ: ತಮಿಳುನಾಡಿಗೆ ನೀರು ಹರಿಸಬೇಕೆಂದು CWMA ಆದೇಶಕ್ಕೆ ವಿರೋಧಿಸಿ ಭುವನೇಶ್ವರಿ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ನಡೆಸಿದವು. ಒಣಗಿದ ಸೊಪ್ಪು, ತರಕಾರಿ ಬೆಳೆ ಹಿಡಿದು ವಿವಿಧ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ತಮಿಳುನಾಡಿಗೆ ನೀರು ಬಿಟ್ಟಿದ್ದರಿಂದ ಕಾವೇರಿ ನೀರು ಕಡಿಮೆಯಾಗುತ್ತಿದೆ. ಪ್ರಧಾನಿ ಮೋದಿ ಕರ್ನಾಟಕ, ತಮಿಳುನಾಡು ನಡುವೆ ಮಧ್ಯಸ್ಥಿಕೆ ವಹಿಸಬೇಕು ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿದವು.