ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಬಿದುರಿನ ಮರಗಳು ಮತ್ತು ಕಲ್ಲು ಬಂಡೆಗಳು ಉರುಳಿ ಮುಖ್ಯ ರಸ್ತೆಯಲ್ಲೇ ಬಿದ್ದಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆಯಲ್ಲಿ ಬಿದ್ದಿರುವ ಕಲ್ಲು ಬಂಡೆಗಳನ್ನು ತೆರವು ಮಾಡಬೇಕೆಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕಳೆದ ಒಂದು ವಾರಗಳಿಂದ ಸತತ ಮಳೆಯಾತ್ತಿರುವ ಹಿನ್ನೆಲೆಯಲ್ಲಿ ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ಮಾರ್ಗದ ಮಧ್ಯದ ಹಲವು ಕಡೆಗಳಲ್ಲಿ ಕಲ್ಲುಬಂಡೆಗಳು, ಸಣ್ಣ ಕಲ್ಲುಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಅಲ್ಲದೆ
ಹಾಲಳ್ಳ ಸಮೀಪದಲ್ಲಿ ಬೃಹತ್ ಬಿದುರಿನ ಮರವೊಂದು ಬುಡ ಸಮೇತ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗಿದೆ. ಈ ಬಗ್ಗೆ ಮಲೆ ಮಹದೇಶ್ವರ ಬೆಟ್ಟದ ಕಾರ್ಯ ನಿರ್ವಾಣಾಧಿಕಾರಿ ಮತ್ತು ಅರಣ್ಯ ಇಲಾಖೆಯಾಗಲಿ ಇದುವರೆವಿಗೂ ಕ್ರಮ ಕೈಗೊಂಡಿರುವುದಿಲ್ಲ.