ಮೈಸೂರು: ಮಹಿಳೆಯರ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿರುವ ಶಾಸಕ ಮುನಿರತ್ನರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕಿ ಪುಷ್ಪ ಅಮರನಾಥ್ ಮೈಸೂರಿನಲ್ಲಿಂದು ಆಗ್ರಹಿಸಿದ್ದಾರೆ.
ಶಾಸಕ ಮುನಿರತ್ನ ಜಾತಿನಿಂದನೆ ವಿಚಾರವಾಗಿ ಮಾತನಾಡಿದ ಅವರು, ಮುನಿರತ್ನ ಮಹಿಳೆಯರ ಬಗ್ಗೆ ಅತ್ಯಂತ ತುಚ್ಚವಾಗಿ ಮಾತನಾಡಿದ್ದಾರೆ, ಜಾತಿ ನಿಂದನೆ ಮಾಡಿದ್ದಾರೆ. ರಾಜ್ಯಪಾಲರು ಕೂಡಲೇ ಮುನಿರತ್ನರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಹಾಗೂ ಬಿಜೆಪಿ ಪಕ್ಷ ಕೂಡ ಮುನಿರತ್ನನನ್ನು ಪಕ್ಷದಿಂದ ಉಚ್ಷಾಟಿಸಬೇಕು ಎಂದು ಆಗ್ರಹಿಸಿದ್ದಾರೆ.