ಮಾಲೂರು : ಕೋಲಾರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯ ಕಾರಿ ಸದಸ್ಯರಾಗಿ ಯಟ್ಟಕೋಡಿ ಗ್ರಾಮದ ರಾಜ್ ಗೋಪಾಲ್ ಅವರನ್ನು ಯುವ ಮೊರ್ಚಾ ಜಿಲ್ಲಾಧ್ಯಕ್ಷ ತೇಜಸ್ ಅವರು ಆಯ್ಕೆ ಮಾಡಿದ್ದಾರೆ.
ತಾಲೂಕಿನ ಚಿಕ್ಕತಿರುಪತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಟ್ಟಕೋಡಿ ಗ್ರಾಮದ ಯುವಕ ರಾಜ್ ಗೋಪಾಲ್ ಅವರ ಈ ಹಿಂದೆ ತಾಲೂಕು ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಳೆದ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡಿದ್ದು ಅವರ ಪಕ್ಷ ನಿಷ್ಠೆ ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಪದಾಧಿಕಾರಿಯನ್ನಾಗಿ ಆಯ್ಕೆ ಮಾಡಲಾಗಿದೆ.
ತಮ್ಮನ್ನು ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲು ಸಹಕಾರ ನೀಡಿದ ಸಂಸದ ಎಸ್.ಮುನಿಸ್ವಾಮಿ, ಮಾಜಿ ಶಾಸಕರಾದ ಕೆ.ಎಸ್.ಮಂಜುನಾಥ್ ಗೌಡ, ರಾಜ್ಯ ಬಿಜೆಪಿ ಕಾರ್ಯ ಕಾರಿ ಸಮಿತಿ ಸದಸ್ಯ ಎಟ್ಟಕೋಡಿ ಕೃಷ್ಣಾರೆಡ್ಡಿ, ಜಿಲ್ಲಾಧ್ಯಕ್ಷ ವೇಣುಗೋಪಾಲ್, ತಾಲ್ಲೂಕು ಅಧ್ಯಕ್ಷ ಟಿ. ಬಿ.ಕೃಷ್ಣಪ್ಪ ಹಾಗೂ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ತೇಜಸ್ ಅವರಿಗೆ ರಾಜ್ ಗೋಪಾಲ್ ಧನ್ಯವಾದ ತಿಳಿಸಿದ್ದಾರೆ.