ಮಂಡ್ಯ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಅವರ ಪುಣ್ಯ ಸ್ಮರಣೆಯಲ್ಲಿ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಕಾರ್ಯಧ್ಯಕ್ಷ ಎಂ.ಎಸ್.ಚಿದಂಬರ್, ರಾಜೀವ್ ಗಾಂಧಿ ಅವರು ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದ ನಾಯಕರಾಗಿದ್ದರು, ಭಾರತ ದೇಶದ ಅಭಿವೃದ್ಧಿಗೆ ಕೊಡುಗೆ ಕೊಟ್ಟಿರುವುದನ್ನು ನಾವು ನೆನಪಿಸಿಕೊಳ್ಳಬೇಕಾಗಿದೆ, ಇದು ಇತರೆ ದೇಶಗಳಿಗೂ ಮಾದರಿ ಎಂಬುದನ್ನು ಮರೆಯುವಂತಿಲ್ಲ ಎಂದು ಸ್ಮರಿಸಿದರು.
ರಾಜೀವ್ ಗಾಂಧಿ ಅವರು ಕಾಣದ ಶಕ್ತಿಯ ಕೃತ್ಯಕ್ಕೆ ಬಲಿಯಾಗಿಯಾದರು? ಇದು ನಮ್ಮ ದೇಶಕ್ಕೆ ಅಪಾರ ನಷ್ಟ ಉಂಟು ಮಾಡಿದೆ. ರಾಜೀವ್ ಗಾಂಧಿ ಅವರು ಕಿರಿಯ ವಯಸ್ಸಿನಲ್ಲೇ ಪ್ರಧಾನಿಯಾಗಿದ್ದರು, ಈ ದೇಶದ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕರು ಹೌದು ಎಂದು ಬಣ್ಣಿಸಿದರು.
ನಗರಸಭಾ ಸದಸ್ಯ ಶ್ರೀಧರ್, ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷ ಅಂಜನಾ ಶ್ರೀಕಾಂತ್, ಮುಖಂಡರಾದ ಸುಂಡಳ್ಳಿ ಮಂಜುನಾಥ, ಕಾಗೆಹಳ್ಳದ ದೊಡ್ಡಿ ರಾಮಕೃಷ್ಣ, ಜಯರಾಮ್, ವಿಜಯಕುಮಾರ್, ಚನ್ನಪ್ಪ ಭಾಗವಹಿಸಿದ್ದರು.