ಕರ್ನಾಟಕ ರಾಜ್ಯ ಪ್ರಾಥಾಮಿಕ ಶಾಲಾ ಶಿಕ್ಷಕರ ಸಂಘದಿಂದ ಆಗ್ರಹ
ಪ್ರತಿನಿಧಿ ವರದಿ ಬೇಲೂರು
ವಿವಿಧ ಬೇಡಿಕೆಗಳನ್ನು ಈಡೇರಿಸವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಾಮಿಕ ಶಾಲಾ ಶಿಕ್ಷಕರ ಸಂಘದ ಬೇಲೂರು ತಾಲೂಕು ಪದಾಧಿಕಾರಿಗಳು ಸೋಮವಾರ ಸಂಜೆ ಕ್ಷೇತ್ರ ಸಮನ್ವಯಾಧಿಕಾರಿ ಶಿವಮರಿಯಪ್ಪರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ಪ್ರಾಥಾಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್.ಬಿ.ಪಾಲಾಕ್ಷ ಮಾತನಾಡಿ, ಕಳೆದ ಆರೇಳು ವರ್ಷಗಳಿಂದ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅಳವಡಿಸಿರುವ ಅವೈಜ್ಞಾನಿಕ ಅಂಶಗಳಿಂದ ಪ್ರಾಥಮಿಕ ಶಾಲೆಗಳಲ್ಲಿ ಕೆಲ ಮಾಡುತ್ತಿರುವ ಪದವೀಧರ ಶಿಕ್ಷಕರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿದ್ದೆವು. ಆದರೂ ಸ್ಪಂದಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯದಂತೆ ಕೈಗೊಂಡ ಬೆಡಿಕೆಗಳನ್ನು ಸರ್ಕಾರ ಈಡೇರಿಸುವಂತೆ ಆಗ್ರಹಿಸಿ ಮತ್ತು ಸರ್ಕಾರದ ಗಮನ ಸೆಳೆಯಲು ಕ್ಷೇತ್ರ ಶಿಕ್ಷಣಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತಿದ್ದೇವೆ. ಮತ್ತು ಆ.೧೨ ರಂದು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಿದ್ದ ಎಲ್ಲ ಶಿಕ್ಷಕರು ಆಗಮಿಸಬೇಕೆಂದು ತಿಳಿಸಿದರು.
ಪ್ರಾಥಾಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ರಘುಕುಮಾರ, ಉಪಾಧ್ಯಕ್ಷ ಮೊಹಿಸಿನ್ ತಾಜ್, ರೂಪ, ಜಯಣ್ಣ, ಬಸವರಾಜು, ಸುಧಾಮಣಿ, ಕುಮಾರಸ್ವಾಮಿ ಲತಾ ಸೇರಿದಂತೆ ಇತರರಿದ್ದರು.