16ಕೆಜಿಎಲ್-2
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣಕ್ಕೆ ಶನಿವಾರ ಅಧಿಕಾರವಹಿಸಿಕೊಂಡ ಬಳಿಕ ಪ್ರಪ್ರಥಮ ಬಾರಿಗೆ ಆಗಮಿಸಿದ ರಾಜ್ಯ ಉಗ್ರಾಣ ನಿಗಮದ ನೂತನ ಅಧ್ಯಕ್ಷ ಎಸ್.ಜಯಣ್ಣ ಅವರನ್ನು ಭೀಮನಗರದ ಜನತೆ ಪರವಾಗಿ ಯಜಮಾನರು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ದೊಡ್ಡಯಜಮಾನ ಸಿ.ಬಾಬು, ಯಜಮಾನರಾದ ನಟರಾಜ್, ಎಂ.ಜಗದೀಶ್, ಎಂ.ಸಿದ್ದಾರ್ಥ, ಮಾಜಿ ದೊಡ್ಡ ಯಜಮಾನ ಚಿಕ್ಕಮಾಳಿಗೆ, ನಗರಸಭಾ ಮಾಜಿ ಅಧ್ಯಕ್ಷ ಎಸ್.ರಮೇಶ್, ಸದಸ್ಯರಾದ ಮಂಜುನಾಥ್, ಬಸ್ತಿಪುರ ಶಾಂತರಾಜು ಸೇರಿ ಇತರರು ಇದ್ದರು.
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ವಿದ್ಯುತ್ ಕೇಂದ್ರದಿಂದ ಹೊರ ಹೊಮ್ಮುವ 11 ಕೆವಿ ಮುಡಿಗುಂಡ ಫೀಡರ್ ನಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಗರಸಭಾ ವ್ಯಾಪ್ತಿಯ ವಿವಿದ ಬಡಾವಣೆಗಳಲ್ಲಿ ಮಾ.17 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬಾಪುನಗರ, ಮುಡಿಗುಂಡ, ಶಂಕನಪುರ, ಬೆಂಡಹಳ್ಳಿ, ಬೂದಿತಿಟ್ಟು ಬಡಾವಣೆಯಲ್ಲಿ ಭಾನುವಾರ ಬೆಳಗ್ಗೆ 10 ರಿಂದ 3 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.