ಪ್ರತಿನಿಧಿ ವರದಿ ಕೊಳ್ಳೇಗಾಲ
ತಾಲೂಕಿನ ದೊಡ್ಡಿಂದುವಾಡಿ ವೃತ್ತದಲ್ಲಿ ಮೇ.13 ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮಲೆ ಮಹದೇಶ್ವರ ಬೆಟ್ಟ ಮಾರ್ಗದ ಸಂಚಾರಕ್ಕೆ ನಿರ್ಬಂಧ ವಿಧಿಸಿ ರಸ್ತೆ ತಡೆ ಚಳುವಳಿ ನಡೆಸಲು ನಿರ್ಧರಿಸಿದ್ದಾರೆ.
ಹನೂರು ಹಾಗೂ ಕೊಳ್ಳೇಗಾಲ ತಾಲೂಕಿನ ವಿವಿದ ಗ್ರಾಮಗಳಿಗೆ ಅಸಮರ್ಪಕ ಕೆಎಸ್ ಆರ್ ಟಿಸಿ ಬಸ್ ಸಂಚಾರವನ್ನು ವಿರೋಧಿಸಿ ರಸ್ತೆ ಸಂಚಾರ ತಡೆ ಚಳುವಳಿ ಹಮ್ಮಿಕೊಂಡಿರುವ ರೈತ ಮುಖಂಡರು, ಎಲ್ಲೆಡೆ ಬಸ್ ಸಂಚಾರ ಕಲ್ಪಿಸುವಂತೆ ಈಗಾಗಲೇ ಕೊಳ್ಳೇಗಾಲ ಕೆಎಸ್ ಆರ್ ಟಿಸಿ ಡಿಪೋ ವ್ಯವಸ್ಥಾಪಕರಿಗೆ ಲಿಖಿತ ಮನವಿ ಪತ್ರ ಸಲ್ಲಿಸಿದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವುದನ್ನು ಚಳವಳಿ ವೇಳೆ ವಿರೋಧಿಸಲು ತೀರ್ಮಾನಿಸಿರುವುದಾಗಿ ಸಂಘದ ಅಧ್ಯಕ್ಷ ಎಂ.ಶಿವಮಲ್ಲು ಹಾಗೂ ಪ್ರಧಾನ ಕಾರ್ಯದರ್ಶಿ ಪೆರಿಯನಾಯಗಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment