ಕೊಳ್ಳೇಗಾಲ: ಪಟ್ಟಣದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಇಂಜಿನಿಯರ್ ಎಸ್.ನಂಜುಂಡಯ್ಯ(55) ಶುಕ್ರವಾರ ಮುಂಜಾನೆ ಅನಾರೋಗ್ಯದ ಹಿನ್ನೆಲೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ಸ್ವಗ್ರಾಮ ಸಿದ್ದಯ್ಯನಪುರದ ಜಮೀನಿನಲ್ಲಿ ನೆರವೇರಿತು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಎಇಇ ಶಿವಪ್ರಕಾಶ್, ಕಚೇರಿ ವ್ಯವಸ್ಥಾಪಕ ಸಿದ್ದರಾಜು ಸೇರಿದಂತೆ ಇಲಾಖೆಯ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳು ಮೃತರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವಾನ ತಿಳಿಸಿದ್ದಾರೆ.
5ಕೆಜಿಎಲ್-1 ಫೋಟೋ ಶೀರ್ಷಿಕೆ: ಎಸ್.ನಂಜುಂಡಯ್ಯ