ಪ್ರತಿನಿಧಿ ವರದಿ ಮಡಿಕೇರಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಆಯ್ಕೆಯಾಗಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಜಿಲ್ಲಾಡಳಿತ ಭವನಕ್ಕೆ ತೆರಳಿ ಮಡಿಕೇರಿ ಶಾಸಕ ಡಾ.ಮಂತರ್ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರನ್ನು ಭೇಟಿ ನೀಡಿದರು.
ಸುವರ್ಣ ಕರ್ನಾಟಕ ಸಮುಚ್ಚಯ ಭವನ ಶೀಘ್ರದಲ್ಲಿ ಪೂರ್ಣಗೊಳಿಸಿಕೊಡಬೇಕಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿ ಅವರಲ್ಲಿ ನೂತನ ಅಧ್ಯಕ್ಷರು ಮನವಿ ಮಾಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಚಂದ್ರಶೇಖರ್ ಪೆರಾಲು, ರಿಜಿಸ್ಟಾರ್ ಚಿನ್ನಸ್ವಾಮಿ ಇದ್ದರು.
ಫೋಟೋ 14 ಎಂಡಿಕೆ 04 ; ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಅಧಿಕಾರ ವಹಿಸಿಕೊಂಡರು.