ದಿನಕ್ಕೊಂದು ತಿರುವು ಪಡೆಯುತ್ತಿರುವ ಮುಡಾ ಬಹುಕೋಟಿ ಹಗರಣ ರಾಜ್ಯ ನಾಯಕರುಗಳ ನಡುವೆ ಗಲಭೆ ಎಬ್ಬಿಸಿದೆ. ಸಿಎಂ ಪರ-ವಿರೋಧಗಳು ಸಿಎಂ ತವರಲ್ಲಿ ಭಾರಿ ಸದ್ದು ಮಾಡ್ತಿದೆ. ಕೈ ನಾಯಕರುಗಳು ಸಿಎಂ ಪರ ಸಮರ್ಥನೆ ಕೊಡುತ್ತಿದ್ದರೆ, ಇತ್ತ ವಿಪಕ್ಷಗಳು ಸಿಎಂ ರಾಜಿನಾಮೆಗೆ ಪಟ್ಟು ಹಿಡಿದಿವೆ.ಇಂದು ಕೂಡ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿದೆ.
ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿರುವ ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಘೋಷಣೆ ಹಾಗೂ ಹಾಡುಗಳನ್ನ ಹೇಳುವುದರ ಮೂಲಕ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕ ಶ್ರೀ ವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ನೂರಾರು ಕಾರ್ಯಕಾರ್ತರು ಭಾಗಿಯಾಗಿದ್ದರು.