- ಎಚ್.ಎಂ.ರವಿಕುಮಾರ್ ಸಲಹೆ
ಪ್ರತಿನಿಧಿ ವರದಿ ದೇವನಹಳ್ಳಿ
ಪ್ರತಿಯೊಬ್ಬರೂ ಪರಿಸರ ಉಳಿವಿಗೆ ಶ್ರಮಿಸಿದರೆ ಮುಂದಿನ ಪೀಳಿಗೆಯ ನೆಮ್ಮದಿ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವಿಕುಮಾರ್ ತಿಳಿಸಿದರು.
ತಾಲೂಕಿನ ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಶಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸ್ಮರಣೆ ಮತ್ತು ಜನ್ಮ ದಿನದ ಅಂಗವಾಗಿ ಗಿಡಗಳನ್ನು ನೆಡಲಾಯಿತು.
ಪರಿಸರದ ಉಳಿವಿಗೆ ಪೂರಕವಾಗುವ ವಿಷಯಗಳ ಬಗ್ಗೆ ನಮ್ಮ ಸಾಮಾನ್ಯ ಜ್ಞಾನ ತಾನಾಗಿಯೇ ಬೆಳೆಯುತ್ತದೆ. ಆದರೆ ಅದು ಅಷ್ಟು ಸುಲಭವಲ್ಲ. ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಆವಿಷ್ಕಾರದಿಂದ ಪ್ರಸ್ತುತ ಮಾನವನ ಜೀವನ ಹಾಗೂ ಚಟುವಟಿಕೆಗಳು ಅತ್ಯಂತ ಸಂಕೀರ್ಣವಾಗಿವೆ. ಇದರಿಂದ ಹೆಚ್ಚಿನವರು ಪ್ರಕೃತಿಯಿಂದ ದೂರಾಗಿ ವಿವಿಧ ಅನೈಸರ್ಗಿಕ ಚಟುವಟಿಕೆಗಳಲ್ಲಿ ಕಾಲಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಮಂಡಲ ಅಧ್ಯಕ್ಷ ಸುಂದರೇಶ್, ಕೆ. ಸಿ.ಮುನಿರಾಜು, ಜಿಲ್ಲಾ ರೈತ ಮೋರ್ಚಾ ಖಜಾಂಚಿ ಗಣೇಶಬಾಬು, ಮಂಡಲದ ಉಪಾಧ್ಯಕ್ಷ ಆರ್.ಪುನೀತ್, ಮಧುಸೂದನ್, ಡಿ.ಎಸ್.ನಾಗರಾಜ್, ರೂಪೇಶ್, ಪ್ರೇಮ, ಅರ್ಜುನ್, ಸೋಮಶೇಖರ್, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಇದ್ದರು.
5ಡಿಎಚ್ಎಲ್ ಪಿ -೨ ದೇವನಹಳ್ಳಿ ತಾಲೂಕಿನ ವಿಜಯಪುರ ರಸ್ತಯಲ್ಲಿರುವ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಶಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸ್ಮರಣೆ ಮತ್ತು ಜನ್ಮ ದಿನದ ಅಂಗವಾಗಿ ತಾಯಿ ಮತ್ತು ಮಗುವಿನ ಜೊತೆ ಗಿಡಗಳನ್ನು ನೆಡಲಾಯಿತು.