ಪ್ರತಿನಿಧಿ ವರದಿ ಹುಲ್ಲಹಳ್ಳಿ
ಗ್ರಾಮ ಪಂಚಾಯಿತಿ ಅಭಿವೃದ್ಧಿಯಿಂದ ವಿವಿಧ ಕಾರ್ಯಕ್ರಮಗಳಲ್ಲಿ ಫಲಾನುಭವಿಗಳನ್ನು ಗುರುತಿಸುವ ಮೂಲಕ ಯೋಜನೆಗಳನ್ನು ಪೂರೈಸಲಾಗುವುದು ಎಂದು ಗ್ರಾಪಂ ಅಧ್ಯಕ್ಷೆ ದೇವಮ್ಮ ಹೇಳಿದರು.
ಹುಲ್ಲಳ್ಳಿ ಗ್ರಾಪಂ ಆವರಣದಲ್ಲಿ ಏರ್ಪಡಿಸಲಾಗಿದ 2023-24ನೇ ಸಾಲಿನ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಯಾವುದೇ ಒಂದು ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒತ್ತು ನೀಡಿದರೆ ಆ ಗ್ರಾಮವು ಪೂರಕ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಹೇಳಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಮಾತನಾಡಿ, ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಗಿದ್ದು, 25- 26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಗಳನ್ನು ಈ ಗ್ರಾಮ ಸಭೆಯಲ್ಲಿ ಹಮ್ಮಿಕೊಂಡಿದರೆ. ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ವಿವಿಧ ಇಲಾಖೆಗಳ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ನೀಡಿ ಎಂದರು.
2025-26ನೇ ಸಾಲಿನ ನರೇಗಾ ಯೋಜನೆಯಡಿ ಕಾಮಗಾರಿ ಪಟ್ಟಿಯಲ್ಲಿ ಕೊಟ್ಟಿಗೆ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಚರಂಡಿಗಳ ಅಭಿವೃದ್ಧಿಗಳ ಬೇಡಿಕೆ ಪಟ್ಟಿಯನ್ನು ದಾಖಲು ಮಾಡಿಕೊಳ್ಳಲಾಯಿತು.
ಉಪಾಧ್ಯಕ್ಷ ಎಚ್.ಪಿ.ಲೋಕೇಶ್, ಸದಸ್ಯ ಮಹೇಶ್, ಶಿವಣ್ಣ, ಎಚ್.ಜೆಮಲ್ಲಿಕಾರ್ಜುನ, ನಾಗೇಂದ್ರ, ಜಯಮ್ಮ, ರತ್ನಮ್ಮ, ಲೆಕ್ಕ ಪರಿಶೋಧಕ ಬಸವಣ್ಣ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.