ಮಂಡ್ಯ:
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ದಿ. ಸಿ.ಕೆ. ರವಿಕುಮಾರ್ ಚಾಮಲಾಪುರ ಸಂಸ್ಮರಣೆ ಪ್ರಯುಕ್ತ ಮಾ. 23 ರ ಶನಿವಾರ ಮದ್ಯಾಹ್ನ 3 ಗಂಟೆಗೆ, ನಗರದ ಹೊಳಲು ಸರ್ಕಲ್ ನ ಎಂ ಬಿ ಆರ್ ಎಫ್ ನೀಟ್ ಅಕಾಡೆಮಿ ಸಭಾಂಗಣದಲ್ಲಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ವೃದ್ಧಿ ಹಾಗೂ ವ್ಯಕ್ತಿತ್ವ ವಿಕಸನ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಮಂಡ್ಯ ತಾ. ಕ. ಸಾ. ಪ.ಅಧ್ಯಕ್ಷ ಚಂದ್ರಲಿಂಗು ತಿಳಿಸಿದ್ದಾರೆ.
ಸಮಾರಂಭವನ್ನು ಮಂಡ್ಯ ಜಿಲ್ಲಾ ಕ. ಸಾ. ಪ ಗೌರವ ಕಾರ್ಯದರ್ಶಿ ಡಾ. ಹುಸ್ಕೂರು ಕೃಷ್ಣೇಗೌಡ ಉದ್ಘಾಟಿಸಲಿದ್ದು, ತಾ. ಕ. ಸಾ. ಪ. ಅಧ್ಯಕ್ಷ ಚಂದ್ರಲಿಂಗು ಅಧ್ಯಕ್ಷತೆ ವಹಿಸಲಿದ್ದಾರೆ. ಅನಿಕೇತನ ಪದವಿ ಪೂರ್ವ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎ. ಎಸ್.ರಾಹುಲ್ ವ್ಯಕ್ತಿತ್ವ ವಿಕಸನದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ .
ಮುಖ್ಯ ಅತಿಥಿಗಳಾಗಿ, ಜಿಲ್ಲಾ ಕ. ಸಾ. ಪ. ದ. ಕೋಶಾಧ್ಯಕ್ಷ ಬಿ.ಎಂ. ಅಪ್ಪಾಜಪ್ಪ,ಗೌರವ ಕಾರ್ಯದರ್ಶಿ ಜಿ. ಧನಂಜಯ ದರಸಗುಪ್ಪೆ, ಸಂಘ ಸಂಸ್ಥೆ ಪ್ರತಿನಿಧಿ ಹೊಳಲು ಶ್ರೀಧರ್,ನಗರ ಘಟಕದ ಅಧ್ಯಕ್ಷೆ ಸುಜಾತ ಕೃಷ್ಣ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.