ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡಿದ್ದು ತಪ್ಪು ಅಲ್ವಾ? ಇದನ್ನು ಮುಚ್ಚಿಕೊಳ್ಳಲು ಯತೀಂದ್ರ ವಿಡಿಯೋ ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಯತೀಂದ್ರ ಎಲ್ಲಿಯಾದರೂ ವರ್ಗಾವಣೆ ವಿಚಾರ ಮಾತಾಡಿದ್ದಾರಾ? ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆಗಾಗಿ ಹಣ ಪಡೆದಿಲ್ಲ. ಹಣ ಪಡೆದಿದ್ದರೆ ರಾಜಕೀಯದಿಂದ ನಿವೃತ್ತಿಯಾಗುವೆ ಎಂದರು.