ಮೈಸೂರು: ಸಂಸದ ವಿ.ಶ್ರೀನಿವಾಸ ಪ್ರಸಾದ್ ಜತೆ ಮಾತನಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ನಾನು ಭೇಟಿಯಾಗಿಲ್ಲ. ದೂರವಾಣಿ ಮೂಲಕವೂ ಮಾತನಾಡಿಲ್ಲ. ಡಾ.ಮಹದೇವಪ್ಪ, ಕೆ.ವೆಂಕಟೇಶ್ ಹೋಗಿ ಭೇಟಿ ಆಗಿದ್ದಾರೆ. ಏನು ಹೇಳಿದ್ದಾರೆ ಅಂತ ಅವರನ್ನೇ ಕೇಳಿ. ಕಾಂಗ್ರೆಸ್ ಪಕ್ಷಕ್ಕೆ ಅನೇಕರು ಬರುತ್ತಾರೆ. ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದರು.