ನಂಬಿಕೆ ದ್ರೋಹಿಗಳ ಋಣ ತೀರಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಕೋಲಾರದಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜರ ಅರಮನೆ ಹಾಳು ಮಾಡಿದವರ ಋಣ ತೀರಿಸಬೇಕು ಅಂತೀರಲ್ಲಾ? ಸಿಎಂ ಸಿದ್ದರಾಮಯ್ಯನವರೇ ನಿಮಗೆ ಮಾನ, ಮರ್ಯಾದೆ ಇದೆಯಾ? ಯಾವತ್ತೋ ಎಗರಿಹೋದ ಟಿಪ್ಪುವಿನ ಖಡ್ಗ ಇಟ್ಟುಕೊಂಡು ಓಡಾಡುವ ನಿಮಗೆ ಇಷ್ಟು ಇರಬೇಕಾದ್ರೆ? ನಮಗೆ ಇನ್ನೆಷ್ಟು ಇರಬೇಡಾ? ಟಿಪ್ಪು ಹತ್ಯೆ ಮಾಡಿದ ಉರಿಗೌಡ, ನಂಜೇಗೌಡನ ವಂಶಸ್ಥರು ನಾವು. ನಮಗೆ ಇನ್ನೆಷ್ಟು ಇರಬೇಡಾ? ಎಂದ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದರು.