‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಡಾ. ಸಿಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸಿದೆ. ಅವರ ‘ಹೃದಯ’ ನೋಡಿ ಜನ ಮತದಾನ ಮಾಡಲಿದ್ದಾರೆ. ಹೀಗಾಗಿ ಡಿಕೆ ಸುರೇಶ್ ಈ ಬಾರಿ ಸೋಲಬಹುದು ಎಂದು ಹೇಳಲಾಗುತ್ತಿದೆಯಲ್ಲ’ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಏನ್ ಹೃದಯ ನೋಡಿ ವೋಟ್ ಹಾಕ್ತಾರೆ ಎಂದು ಪ್ರಶ್ನಿಸಿದರು.
ಡಾ. ಮಂಜುನಾಥ್ ಸರ್ಕಾರಿ ಕೆಲಸದಲ್ಲಿದ್ದವರು. ನಿವೃತ್ತರಾಗಿ ಈಗ ರಾಜಕಾರಣಕ್ಕೆ ಬಂದಿದ್ದಾರೆ. ಸಂಸದ ಡಿಕೆ ಸುರೇಶ್ ಮೂರು ಬಾರಿ ಲೋಕಸಭಾ ಸದಸ್ಯರಾಗಿದ್ದು, ಸಾಕಷ್ಟು ಕೆಲಸ ಮಾಡಿದ್ದಾರೆ. ಸಂಸತ್ನಲ್ಲಿ, ಸಂಸತ್ ಹೊರಗಡೆ, ಕ್ಷೇತ್ರದಲ್ಲಿ ಬಹಳ ಕ್ರಿಯಾಶೀಲರಾಗಿ ಕೆಲಸ ಮಾಡಿದವರು. ಹೀಗಾಗಿ ಬಿಜೆಪಿಯವರು ಯಾರನ್ನೇ ಅಭ್ಯರ್ಥಿಯನ್ನಾಗಿ ಮಾಡಿದರೂ ಡಿಕೆ ಸುರೇಶ್ ಗೆದ್ದೇ ಗೆಲ್ಲುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.