ಮೈಸೂರು : ಜೆಡಿಎಸ್ ಹುಟ್ಟಿದ್ದು ಹೇಗೆ ಗೊತ್ತ? 2009 ರಾಮಕೃಷ್ಣ ಹೆಗಡೆ, ಎಸ್.ಬೊಮ್ಮಾಯಿ ಸೇರಿದಂತೆ ಅನೇಕರು ಜನತಾದಳ ಬಿಟ್ಟು ಹೋದರು. ಬಳಿಕ ಬಿಜೆಪಿ ಜೊತೆ ಸೇರಿಕೊಂಡು ಜೆಡಿಯು ಮಾಡಿಕೊಂಡ್ರು. ಆಗ ನಾನು ಎಚ್.ಡಿ.ದೇವೇಗೌಡರ ಬಳಿ ಹೋಗಿ ಜೆಡಿಎಸ್ ಮಾಡೋಣ ಎಂದು ಹೇಳಿದೆ. ನಂತರ ಜೆಡಿಎಸ್ ಹುಟ್ಟಿಕೊಂಡಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಜೆಡಿಎಸ್ ಹುಟ್ಟಿದ ಕಥೆ ಹೇಳಿದರು. ಈ ಮೂಲಕ ಪರೋಕ್ಷವಾಗಿ ಕರ್ನಾಟಕದಲ್ಲಿ ಜೆಡಿಎಸ್ ಹುಟ್ಟು ಹಾಕಿದ್ದೆ ತಾವು ಎನ್ನುವ ಅರ್ಥದಲ್ಲಿ ಹೇಳಿದರು.
ಮೈಸೂರಿನಲ್ಲಿ ಇಂದು ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, 2009 ರಾಮಕೃಷ್ಣ ಹೆಗಡೆ, ಎಸ್.ಬೊಮ್ಮಾಯಿ ಸೇರಿದಂತೆ ಅನೇಕರು ಜನತಾದಳ ಬಿಟ್ಟು ಹೋದರು. ಆಗ ನಾನು ದೇವೇಗೌಡರ ಬಳಿ ಹೋಗಿ ಜೆಡಿಎಸ್ ಮಾಡೋಣ ಎಂದು ಹೇಳಿದೆ. ನಂತರ ಜೆಡಿಎಸ್ ಹುಟ್ಟಿಕೊಂಡಿತು. ನಾನು ಜೆಡಿಎಸ್ ಸಂಸ್ಥಾಪಕ ಅಧ್ಯಕ್ಷ. ನಂತರ ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ರು. ಜೆಡಿಎಸ್ನಿಂದ ನನಗೆ ಅನ್ಯಾಯ ಆಗಿದೆ ಎಂದು ಹೇಳಿದರು.
ಬಿಜೆಪಿಯವರು ಜೆಡಿಎಸ್ ಜೊತೆ ಶಾಮಿಲ್ ಆಗಿದ್ದಾರೆ. 2018ರಲ್ಲಿ ಸಮಿಶ್ರ ಸರ್ಕಾರ ಜಾರಿಗೆ ಬಂತು. ಕುಮಾರಸ್ವಾಮಿ ಸಿಎಂ ಆಗಿದ್ದರು. ಬಿಜೆಪಿಗೆ ಹೋಗಬಾರದು ಅಂತ ಅವರನ್ನೇ ಸಿಎಂ ಮಾಡಲಾಗಿತ್ತು. ದೇವೇಗೌಡರು ಸಹ ಒಪ್ಪಿಕೊಂಡು ಬಿಜೆಪಿ ಜೊತೆ ಹೋಗಲ್ಲ ಅಂದ್ರು. ಒಂದು ವರ್ಷ ಎರಡು ತಿಂಗಳು ಚೆನ್ನಾಗಿತ್ತು. ಸಮಿಶ್ರ ಸರ್ಕಾರ ತೆಗೆದಿದ್ದು ಮಿಸ್ಟರ್ ಯಡಿಯೂರಪ್ಪ. ಈಗ ಅವರ ಜೊತೆಯೇ ಬಾಯಿ ಬಾಯಿ ಎಂದು ಹೋಗಿದ್ದಾರೆ. ಕುಮಾರಸ್ವಾಮಿ ಸರ್ಕಾರ ತೆಗೆದವರ ಜೊತೆ ದೇವೇಗೌಡರು ನಂಗು ಮೋದಿ ಅವರಿಗೆ ಅವಿನಾಭಾವ ಸಂಬಂಧ ಇದೆ ಎಂದು ಹೇಳಿದ್ದಾರೆ. ನಾನು ದೇವೇಗೌಡರ ಜೊತೆ ಹಲವು ವರ್ಷಗಳ ಕಾಲ ಇದ್ದವನು. 2009ರಲ್ಲಿ ಜನತಾದಳ ವಿಭಜಯನೆಯಾತು. ಬೈರೇಗೌಡರು, ಬೊಮ್ಮಾಯಿ ಎಲ್ಲಾ ಜೆ.ಎಚ್.ಪಟೇಲ್ ಜೊತೆ ಹೊದ್ರು. ನಾವು ಹೋಗಲಿಲ್ಲ. ನಾನು ದೇವೇಗೌಡರು ಎಲ್ಲಾ ಸೇರಿ ಜೆಡಿಎಸ್ ಮಾಡಿದ್ವಿ. ನಾನು ಜೆಡಿಎಸ್ ನ ಫೌಂಡರ್ ಪ್ರೆಸೆಡಿಂಟ್. ದೇವೇಗೌಡರು ನ್ಯಾಷನಲ್ ಪ್ರೆಸಿಡೆಂಟ್ ಆಗಿದ್ರು. ನಾನು ಆರು ವರ್ಷ ಪಕ್ಷ ಕಟ್ಟಿದ್ದೇನೆ. ಆದ್ರೆ, ಜೆಡಿಎಸ್ ಪಕ್ಷದಿಂದ ನನ್ನನ್ನೆ ತೆಗೆದ್ರು ಎಂದು ಜೆಡಿಎಸ್ ವಿರುದ್ಧ ಕಿಡಿಕಾರಿದರು.