ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮುನಿಯಪ್ಪ ಅಭಿಪ್ರಾಯ
ಪ್ರತಿನಿಧಿ ವರದಿ ಹುಣಸೂರು
ರೋಟರಿ ಕ್ಲಬ್, ಟ್ಯಾಲೆಂಟ್ ವಿದ್ಯಾ ಸಂಸ್ಥೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನ ಕಾರ್ಯಕ್ರಮವನ್ನು ಹುಣಸೂರು ನಗರದ ಟ್ಯಾಲೆಂಟ್ ಎಜುಕೇಶನಲ್ ಟ್ರಸ್ಟ್ ನ ಪಿಯು ಕಾಲೇಜಿನಲ್ಲಿ ಆಚರಿಸಲಾಯಿತು.
ಮಾದಕ ದ್ರವ್ಯಗಳಿಂದ ಯುವ ಪೀಳಿಗೆ ಮೇಲೆ ಉಂಟಾಗುತ್ತಿರುವ ಅಡ್ಡ ಪರಿಣಾಮಗಳು ಹಾಗೂ ಅದು ಸಮಾಜದ ಮೇಲೆ ಬೀರುತ್ತಿರುವ ದುಷ್ಪರಿಣಾಮ ಕುರಿತಾಗಿ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮುನಿಯಪ್ಪಅವರು ಮಾತನಾಡಿದರು.
ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ನಕಲಿ ಮದ್ಯ ಮಾರಾಟದಿಂದ ಗ್ರಾಮೀಣ ಭಾಗದ ಜನರಿಗೆ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳು ಹಾಗೂ ರೈತರ ಜಮೀನುಗಳನ್ನು ಗುತ್ತಿಗೆಗೆ ಪಡೆದು ಹೊರರಾಜ್ಯದವರು ಗಾಂಜಾ ಬೆಳೆಯುತ್ತಿರುವ ಪ್ರಕರಣಗಳಿಂದ ಜಮೀನು ಮಾಲೀಕರು ಶಿಕ್ಷೆಗೆ ಗುರಿಯಾಗುತ್ತಿರುವ ಕುರಿತಾಗಿ ಅಬಕಾರಿ ಇನ್ಸ್ ಪೆಕ್ಟರ್ ಆದ ಜಯಂತಿಅವರು ತಿಳಿಸಿದರು.
ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋ.ಎಸ್.ಚನ್ನಕೇಶವ, ವಲಯ ಸೇನಾನಿ ರೋ.ಬಸವರಾಜ್, ಟ್ಯಾಲೆಂಟ್ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ನವೀನ್ ರೈ, ಪ್ರಾಂಶುಪಾಲ ಮಂಜುನಾಥ್, ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.