ಹುಲ್ಲಹಳ್ಳಿ: ಗೌಡರ ಹುಂಡಿ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಬಸವ ಜಯಂತಿಯನ್ನು ಆಚರಿಸಲಾಯಿತು.
ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗಿಯಾದರು. ಶ್ರೀ ಬಸವೇಶ್ವರ ಮತ್ತು ಶ್ರೀ ಶಿವಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೆರವಣಿಗೆ ಸಾಗುವ ರಸ್ತೆಯ ಉದ್ಧಕ್ಕೂ ಮನೆಗಳ ಮುಂದೆ ರಂಗೋಲಿ , ಹಸಿರು ತೋರಣಗಳಿಂದ ಮತ್ತು ವಿದ್ಯುತ್ ದೀಪಾಲಂಕಾರಗಳಿಂದ ಸಿಂಗಾರಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯ, ವೀರಗಾಸೆ, ಕುಣಿತ, ನಂದಿ ಕಂಬ ಕುಣಿತ, ಕಂಸಾಳೆ ಸೇರಿದಂತೆ ವಿವಿಧ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು .
ಬಸವ ಜಯಂತಿ ಪ್ರಯುಕ್ತ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಗ್ರಾಮದ ಮುಖಂಡರು, ಯಜಮಾನರು ಯುವಕರು ಹಾಜರಿದ್ದರು.