ಮಳೆಯ ಆರ್ಭಟಕ್ಕೆ ಕೊಚ್ಚಿಹೋದ ಬಿತ್ತನೆಮಾಡಿದ್ದ ಸೂರ್ಯಕಾಂತಿ,ಹತ್ತಿ ಬೀಜ
ಪ್ರತಿನಿಧಿ ವರದಿ ಚಾಮರಾಜನಗರ
ಇತ್ತೀಚಿನ ದಿನಗಳಿಂದ ಮಳೆ ಉತ್ತಮವಾಗಿ ಸುರಿಯುತ್ತಿದ್ದು, ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೊಚ್ಚಿಹೋಗಿರುವ ಘಟನೆ ತಾಲೂಕಿನ ಹಿರೇಬೇಗೂರು, ಕುಲಗಾಣ ಹಾಗೂ ಅರಳಿಕಟ್ಟೆ ಗ್ರಾಮಗಳಲ್ಲಿ ನಡೆದಿದೆ.
ಹಿರೇಬೇಗೂರಿನ ಚೇರ್ಮನ್ ಮಧು, ರಾಜೇಶ್ ಸೇರಿದಂತೆ ಹತ್ತಾರು ರೈತರು ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಶನಿವಾರ ಸುರಿದ ಮಳೆ ಆರ್ಭಟಕ್ಕೆ ಕೊಚ್ಚಿ ಹೋಗಿದ್ದು, ಮತ್ತೊಮ್ಮೆ ಬಿತ್ತನೆ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಹಿರೇಬೇಗೂರಲ್ಲಿ ಟೊಮ್ಯಾಟೊ ಪೈರು ಕೂಡ ಕೊಚ್ಚಿ ಹೋಗಿದ್ದು, ವೀರಭದ್ರಪ್ಪ ಅವರಿಗೆ ಸೇರಿದ 1 ಎಕರೆ ಪ್ರದೇಶದಲ್ಲಿ ಹಾಕಿದ್ದ ಟೊಮ್ಯಾಟೊ ಪೈರು ಮಳೆ ಪಾಲಾಗಿದೆ. ಚೇರ್ಮನ್ ಮಧು ಅವರು 8 ಬ್ಯಾಗ್ ಸೂರ್ಯಕಾಂತಿ ಬಿತ್ತಿದ್ದರು, ಈಗ ಎಲ್ಲವೂ ಕೊಚ್ಚಿಹೋಗಿದ್ದು ಅಗತ್ಯ ಪರಿಹಾರ ಕೊಡಬೇಕೆಂದು ಆಗ್ರಹಿಸಿದ್ದಾರೆ.
18ಸಿಎಚ್ಎನ್.6:
ಚಿತ್ರವಿದೆ