ಮೈಸೂರು ಅ.14: ವಿಶ್ವವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಶೇಷ ಟೂರ್ ಪ್ಯಾಕೇಜ್ ಕಲ್ಪಿಸಿದೆ. ಪ್ರವಾಸಿಗರಿಗೆ ಗಿರಿದರ್ಶಿನಿ, ದೇವದರ್ಶಿನಿ ಹಾಗೂ ಕೊಡಗು ಟ್ರಿಪ್ ಯೋಜನೆ ಮಾಡಿದೆ. ಅ.20 ರಿಂದ 26ರವರೆಗೆ ಈ ಪ್ಯಾಕೇಜ್ನ ಸೇವೆಯ ಬಸ್ಗಳು ಕಾರ್ಯಾ ನಿರ್ವಹಿಸಲಿವೆ.
ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಉತ್ಸವ ಸಾರಿಗೆ ಸೇವೆಗಳ ಜೊತೆಗೆ ವಿಶೇಷ ಪ್ಯಾಕೇಜ್ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಂಡಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆಯ ಒಂದು ದಿನದ ಪ್ಯಾಕೇಜ್ ಇದಾಗಿದೆ.