ಮೈಸೂರು: ಏಪ್ರಿಲ್ 26 ರಂದು ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಏಪ್ರಿಲ್ 26 ರಂದು ನಡೆಯಲಿರುವ ಚುನಾವಣೆಗೆ ನಾವು ಸಿದ್ದರಿದ್ದೇವೆ. ಜನರ ಮನಸ್ಸಿನಲ್ಲಿ ಮೋದಿಯವರು ಮನೆ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳ ಸಾಧನೆ ಮುಂದಿಟ್ಟುಕೊಂಡು ನಾವು ಚುನಾವಣೆ ಎದುರಿಸುತ್ತಿದ್ದೇವೆ. ಕಳೆದ ಹತ್ತು ವರ್ಷದ ಹಿಂದೆ ದೇಶದ ಆರ್ಥಿಕತೆ ಉತ್ತಮವಾಗಿರಲಿಲ್ಲ. ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಆರ್ಥಿಕತೆ ತುಂಬಾ ಚೆನ್ನಾಗಿದೆ. ಮಹಿಳೆಯರನ್ನ ಸಶಕ್ತರನ್ನಾಗಿ ಮಾಡೋದು ಮೋದಿಯವರ ಗುರಿಯಾಗಿತ್ತು. ಈಗ ನಾವು ಮಹಿಳೆಯರ ಅಭಿವೃದ್ಧಿಯತ್ತ ಸಾಗಿದ್ದೇವೆ. 2047 ಕ್ಕೆ ಭಾರತಕ್ಕೆ ಸ್ವತಂತ್ರ ಬಂದು ನೂರು ವರ್ಷ ತುಂಬಲಿದೆ. ಅಭಿವೃದ್ಧಿ ಭಾರತ ನಿರ್ಮಾಣ ಮಾಡಲು ಸಂಸತ್ ನಲ್ಲಿ 370ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಲಾಗಿದೆ. ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕತಪಡಿಸಿದರು.